ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.
ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.
ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.
ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…