Advertisement
ಸುದ್ದಿಗಳು

ಕೆಎಂಎಫ್‌ನಿಂದ ಫೆಡರಲ್‌ ತತ್ವ ಉಲ್ಲಂಘನೆ | ಅಮೂಲ್ ಆಯ್ತು,ಕೇರಳದಲ್ಲೀಗ ನಂದಿನಿ ಹಾಲಿಗೆ ವಿರೋಧ…! |

Share

ಕರ್ನಾಟಕದಲ್ಲಿ ಅಮೂಲ್‌ ಹಾಲಿಗೆ ವಿರೋಧ ವ್ಯಕ್ತವಾಗುತ್ತಿದಂತೆ ಕೇರಳದಲ್ಲಿ ಈಗ ನಂದಿನಿ ಹಾಲಿಗೆ  ವಿರೋಧ ವ್ಯಕ್ತವಾಗುತ್ತಿದೆ.

ಕೇರಳ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಕೇರಳದಲ್ಲಿ ಮಿಲ್ಮಾ ಹಾಲನ್ನು ಮಾರಾಟ ಮಾಡುತ್ತಿದೆ. ಈಗ ಕೆಸಿಎಂಎಂಎಫ್ ಕೇರಳದಲ್ಲಿ ನಂದಿನಿ ಹಾಲು ಮಾರಾಟವಾಗುತ್ತಿರುವುದನ್ನು ಅನೈತಿಕ ಎಂದು ಹೇಳಿದೆ.

ಕೇರಳದ ಕೆಲವು ಭಾಗಗಳಲ್ಲಿ ನಂದಿನಿ ಬ್ರಾಂಡ್‌ ಹಾಲು ಮತ್ತು ಇತರ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಕರ್ನಾಟಕ ಹಾಲು ಒಕ್ಕೂಟ (KMF) ಮಳಿಗೆಗಳನ್ನು ತೆರೆದಿದೆ. ಇದು ಭಾರತದ ಡೈರಿ ಕ್ಷೇತ್ರದ ಮೂಲಾಧಾರವಾಗಿರುವ ಸಹಕಾರಿ ಮನೋಭಾವವನ್ನು ಉಲ್ಲಂಘಿಸಿದೆ ಎಂದು ಕೆಸಿಎಂಎಂಎಫ್ ಆರೋಪಿಸಿದೆ.

ಈ ಸಂಬಂಧ ಮಿಲ್ಮಾ ಅಧ್ಯಕ್ಷ ಕೆಎಸ್‌ ಮಣಿ ಪ್ರತಿಕ್ರಿಯಿಸಿ, ಇತ್ತೀಚೆಗೆ ಕೆಲವು ರಾಜ್ಯಗಳ ಹಾಲು ಮಾರಾಟ ಒಕ್ಕೂಟಗಳು ತಮ್ಮ ಪ್ರಮುಖ ಉತ್ಪನ್ನಗಳನ್ನು ತಮ್ಮ ರಾಜ್ಯದ ಹೊರಗಡೆ ಮಾರಾಟ ಮಾಡುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಫೆಡರಲ್ ತತ್ವಗಳು ಮತ್ತು ಸಹಕಾರ ಮನೋಭಾವವನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಹಾಲು ಮಾರಾಟ ಒಕ್ಕೂಟವು ಇತ್ತೀಚೆಗೆ ತನ್ನ ನಂದಿನಿ ಬ್ರಾಂಡ್ ಹಾಲು ಮತ್ತು ಇತರ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದ ಕೆಲವು ಭಾಗಗಳಲ್ಲಿ ತನ್ನ ಮಳಿಗೆಗಳನ್ನು ತೆರೆದಿದೆ. ಇದನ್ನು ಹೇಗೆ ಸಮರ್ಥಿಸಬಹುದು? ಇದನ್ನು ಯಾರೇ ಮಾಡಿದರೂ, ಇದು ಅತ್ಯಂತ ಅನೈತಿಕ ಕೆಲಸ. ಇದು ಭಾರತದ ಡೈರಿ ಚಳುವಳಿಯ ಉದ್ದೇಶವನ್ನು ಸೋಲಿಸುತ್ತದೆ. ಮತ್ತು ರೈತರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುತ್ತದೆ ಎಂದಿದ್ದಾರೆ.

ಒಂದು ರಾಜ್ಯದ ಸಂಘ ಇನ್ನೊಂದು ರಾಜ್ಯದಲ್ಲಿ ತನ್ನ ಉತ್ಪನ್ನವನ್ನು ಮಾರಾಟ ಮಾಡುವುದು ರಾಜ್ಯ ರಾಜ್ಯಗಳ ನಡುವಿನ ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

2 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

3 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

6 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

6 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

9 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

18 hours ago