Advertisement
ಸುದ್ದಿಗಳು

ಕೆಎಂಎಫ್‌ನಿಂದ ಫೆಡರಲ್‌ ತತ್ವ ಉಲ್ಲಂಘನೆ | ಅಮೂಲ್ ಆಯ್ತು,ಕೇರಳದಲ್ಲೀಗ ನಂದಿನಿ ಹಾಲಿಗೆ ವಿರೋಧ…! |

Share

ಕರ್ನಾಟಕದಲ್ಲಿ ಅಮೂಲ್‌ ಹಾಲಿಗೆ ವಿರೋಧ ವ್ಯಕ್ತವಾಗುತ್ತಿದಂತೆ ಕೇರಳದಲ್ಲಿ ಈಗ ನಂದಿನಿ ಹಾಲಿಗೆ  ವಿರೋಧ ವ್ಯಕ್ತವಾಗುತ್ತಿದೆ.

ಕೇರಳ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಕೇರಳದಲ್ಲಿ ಮಿಲ್ಮಾ ಹಾಲನ್ನು ಮಾರಾಟ ಮಾಡುತ್ತಿದೆ. ಈಗ ಕೆಸಿಎಂಎಂಎಫ್ ಕೇರಳದಲ್ಲಿ ನಂದಿನಿ ಹಾಲು ಮಾರಾಟವಾಗುತ್ತಿರುವುದನ್ನು ಅನೈತಿಕ ಎಂದು ಹೇಳಿದೆ.

ಕೇರಳದ ಕೆಲವು ಭಾಗಗಳಲ್ಲಿ ನಂದಿನಿ ಬ್ರಾಂಡ್‌ ಹಾಲು ಮತ್ತು ಇತರ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಕರ್ನಾಟಕ ಹಾಲು ಒಕ್ಕೂಟ (KMF) ಮಳಿಗೆಗಳನ್ನು ತೆರೆದಿದೆ. ಇದು ಭಾರತದ ಡೈರಿ ಕ್ಷೇತ್ರದ ಮೂಲಾಧಾರವಾಗಿರುವ ಸಹಕಾರಿ ಮನೋಭಾವವನ್ನು ಉಲ್ಲಂಘಿಸಿದೆ ಎಂದು ಕೆಸಿಎಂಎಂಎಫ್ ಆರೋಪಿಸಿದೆ.

ಈ ಸಂಬಂಧ ಮಿಲ್ಮಾ ಅಧ್ಯಕ್ಷ ಕೆಎಸ್‌ ಮಣಿ ಪ್ರತಿಕ್ರಿಯಿಸಿ, ಇತ್ತೀಚೆಗೆ ಕೆಲವು ರಾಜ್ಯಗಳ ಹಾಲು ಮಾರಾಟ ಒಕ್ಕೂಟಗಳು ತಮ್ಮ ಪ್ರಮುಖ ಉತ್ಪನ್ನಗಳನ್ನು ತಮ್ಮ ರಾಜ್ಯದ ಹೊರಗಡೆ ಮಾರಾಟ ಮಾಡುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಫೆಡರಲ್ ತತ್ವಗಳು ಮತ್ತು ಸಹಕಾರ ಮನೋಭಾವವನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಹಾಲು ಮಾರಾಟ ಒಕ್ಕೂಟವು ಇತ್ತೀಚೆಗೆ ತನ್ನ ನಂದಿನಿ ಬ್ರಾಂಡ್ ಹಾಲು ಮತ್ತು ಇತರ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದ ಕೆಲವು ಭಾಗಗಳಲ್ಲಿ ತನ್ನ ಮಳಿಗೆಗಳನ್ನು ತೆರೆದಿದೆ. ಇದನ್ನು ಹೇಗೆ ಸಮರ್ಥಿಸಬಹುದು? ಇದನ್ನು ಯಾರೇ ಮಾಡಿದರೂ, ಇದು ಅತ್ಯಂತ ಅನೈತಿಕ ಕೆಲಸ. ಇದು ಭಾರತದ ಡೈರಿ ಚಳುವಳಿಯ ಉದ್ದೇಶವನ್ನು ಸೋಲಿಸುತ್ತದೆ. ಮತ್ತು ರೈತರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುತ್ತದೆ ಎಂದಿದ್ದಾರೆ.

ಒಂದು ರಾಜ್ಯದ ಸಂಘ ಇನ್ನೊಂದು ರಾಜ್ಯದಲ್ಲಿ ತನ್ನ ಉತ್ಪನ್ನವನ್ನು ಮಾರಾಟ ಮಾಡುವುದು ರಾಜ್ಯ ರಾಜ್ಯಗಳ ನಡುವಿನ ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

14 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

23 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

24 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago