Advertisement
ಸುದ್ದಿಗಳು

ಕೆಎಂಎಫ್‌ನಿಂದ ಫೆಡರಲ್‌ ತತ್ವ ಉಲ್ಲಂಘನೆ | ಅಮೂಲ್ ಆಯ್ತು,ಕೇರಳದಲ್ಲೀಗ ನಂದಿನಿ ಹಾಲಿಗೆ ವಿರೋಧ…! |

Share

ಕರ್ನಾಟಕದಲ್ಲಿ ಅಮೂಲ್‌ ಹಾಲಿಗೆ ವಿರೋಧ ವ್ಯಕ್ತವಾಗುತ್ತಿದಂತೆ ಕೇರಳದಲ್ಲಿ ಈಗ ನಂದಿನಿ ಹಾಲಿಗೆ  ವಿರೋಧ ವ್ಯಕ್ತವಾಗುತ್ತಿದೆ.

ಕೇರಳ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಕೇರಳದಲ್ಲಿ ಮಿಲ್ಮಾ ಹಾಲನ್ನು ಮಾರಾಟ ಮಾಡುತ್ತಿದೆ. ಈಗ ಕೆಸಿಎಂಎಂಎಫ್ ಕೇರಳದಲ್ಲಿ ನಂದಿನಿ ಹಾಲು ಮಾರಾಟವಾಗುತ್ತಿರುವುದನ್ನು ಅನೈತಿಕ ಎಂದು ಹೇಳಿದೆ.

ಕೇರಳದ ಕೆಲವು ಭಾಗಗಳಲ್ಲಿ ನಂದಿನಿ ಬ್ರಾಂಡ್‌ ಹಾಲು ಮತ್ತು ಇತರ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಕರ್ನಾಟಕ ಹಾಲು ಒಕ್ಕೂಟ (KMF) ಮಳಿಗೆಗಳನ್ನು ತೆರೆದಿದೆ. ಇದು ಭಾರತದ ಡೈರಿ ಕ್ಷೇತ್ರದ ಮೂಲಾಧಾರವಾಗಿರುವ ಸಹಕಾರಿ ಮನೋಭಾವವನ್ನು ಉಲ್ಲಂಘಿಸಿದೆ ಎಂದು ಕೆಸಿಎಂಎಂಎಫ್ ಆರೋಪಿಸಿದೆ.

ಈ ಸಂಬಂಧ ಮಿಲ್ಮಾ ಅಧ್ಯಕ್ಷ ಕೆಎಸ್‌ ಮಣಿ ಪ್ರತಿಕ್ರಿಯಿಸಿ, ಇತ್ತೀಚೆಗೆ ಕೆಲವು ರಾಜ್ಯಗಳ ಹಾಲು ಮಾರಾಟ ಒಕ್ಕೂಟಗಳು ತಮ್ಮ ಪ್ರಮುಖ ಉತ್ಪನ್ನಗಳನ್ನು ತಮ್ಮ ರಾಜ್ಯದ ಹೊರಗಡೆ ಮಾರಾಟ ಮಾಡುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಫೆಡರಲ್ ತತ್ವಗಳು ಮತ್ತು ಸಹಕಾರ ಮನೋಭಾವವನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಹಾಲು ಮಾರಾಟ ಒಕ್ಕೂಟವು ಇತ್ತೀಚೆಗೆ ತನ್ನ ನಂದಿನಿ ಬ್ರಾಂಡ್ ಹಾಲು ಮತ್ತು ಇತರ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದ ಕೆಲವು ಭಾಗಗಳಲ್ಲಿ ತನ್ನ ಮಳಿಗೆಗಳನ್ನು ತೆರೆದಿದೆ. ಇದನ್ನು ಹೇಗೆ ಸಮರ್ಥಿಸಬಹುದು? ಇದನ್ನು ಯಾರೇ ಮಾಡಿದರೂ, ಇದು ಅತ್ಯಂತ ಅನೈತಿಕ ಕೆಲಸ. ಇದು ಭಾರತದ ಡೈರಿ ಚಳುವಳಿಯ ಉದ್ದೇಶವನ್ನು ಸೋಲಿಸುತ್ತದೆ. ಮತ್ತು ರೈತರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುತ್ತದೆ ಎಂದಿದ್ದಾರೆ.

ಒಂದು ರಾಜ್ಯದ ಸಂಘ ಇನ್ನೊಂದು ರಾಜ್ಯದಲ್ಲಿ ತನ್ನ ಉತ್ಪನ್ನವನ್ನು ಮಾರಾಟ ಮಾಡುವುದು ರಾಜ್ಯ ರಾಜ್ಯಗಳ ನಡುವಿನ ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

5 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

5 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

19 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago