ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಜಿಲ್ಲೆಯ ಹುಲಕಲ್ ಗ್ರಾಮದ ಬಳಿ ಮಣಿಕಂಠ ಹತ್ತಿ ಮಿಲ್ ನಲ್ಲಿ ಹತ್ತಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಹತ್ತಿ ಖರೀದಿ ಕೇಂದ್ರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಹತ್ತಿ ಮಾರಾಟ ಮಾಡಬೇಕು. ಅಕ್ರಮ ಖರೀದಿದಾರರಿಗೆ ಹತ್ತಿ ಮಾರಾಟ ಮಾಡಿ ವಂಚನೆಗೆ ಒಳಗಾಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಕ್ವಿಂಟಾಲ್ಗೆ 7521 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಒಂದು ಎಕರೆಗೆ 12 ಕ್ವಿಂಟಾಲ್ ಹತ್ತಿ ಮಾತ್ರ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…