ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಜಿಲ್ಲೆಯ ಹುಲಕಲ್ ಗ್ರಾಮದ ಬಳಿ ಮಣಿಕಂಠ ಹತ್ತಿ ಮಿಲ್ ನಲ್ಲಿ ಹತ್ತಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಹತ್ತಿ ಖರೀದಿ ಕೇಂದ್ರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಹತ್ತಿ ಮಾರಾಟ ಮಾಡಬೇಕು. ಅಕ್ರಮ ಖರೀದಿದಾರರಿಗೆ ಹತ್ತಿ ಮಾರಾಟ ಮಾಡಿ ವಂಚನೆಗೆ ಒಳಗಾಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಕ್ವಿಂಟಾಲ್ಗೆ 7521 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಒಂದು ಎಕರೆಗೆ 12 ಕ್ವಿಂಟಾಲ್ ಹತ್ತಿ ಮಾತ್ರ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…