Advertisement
MIRROR FOCUS

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

Share

2025-26ನೇ ಸಾಲಿನ 14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು, ಉತ್ಪಾದನಾ ವೆಚ್ಚಕ್ಕಿಂತ ಶೇಕಡ 50ರಷ್ಟು ಹೆಚ್ಚಳ ಮಾಡಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ…..ಮುಂದೆ ಓದಿ….

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ, ದೇಶದ ರೈತರ ಕಲ್ಯಾಣಕ್ಕಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2 ಲಕ್ಷ ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡುತ್ತಿದೆ ಎಂದು ತಿಳಿಸಿದರು. ಬಡ್ಡಿದರ ಸಹಾಯಧನ ಯೋಜನೆ ಅಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ನೆರವು ನೀಡಲಾಗುವುದು. ಶೇಕಡ 4ರ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಯೋಜನೆ ಮೂಲಕ ಅಗತ್ಯ ಕೃಷಿ ಕಾರ್ಯಗಳಿಗೆ ದುಡಿಯುವ ಬಂಡವಾಳವನ್ನು ಖಚಿತಪಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಡಿ 7 ಕೋಟಿ 71 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಡ್ವೇಲ್-ನೆಲ್ಲೂರು ನಡುವೆ 4 ಪಥಗಳ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಹೆದ್ದಾರಿ ನಿರ್ಮಾಣದಿಂದ ಪ್ರಮುಖ ಆರ್ಥಿಕ ಚಟುವಟಿಕೆ ಪ್ರದೇಶಗಳಾಗಿರುವ ಕರ್ನಾಟಕದ ಹುಬ್ಬಳ್ಳಿ, ಹೊಸಪೇಟೆ ಹಾಗೂ ಬಳ್ಳಾರಿಗಳಿಗೂ ಉತ್ತಮ ಸಂಪರ್ಕ ದೊರೆಯಲಿದೆ. ಇದರೊಂದಿಗೆ ರತ್ಲಾಮ್-ನಾಗ್ಡಾ ನಡುವಿನ ಮೂರು ಮತ್ತು ನಾಲ್ಕನೇ ರೈಲು ಮಾರ್ಗ ಹಾಗೂ ವಾರ್ಧಾ-ಬಲಾರ್ಶ್ ನಡುವಿನ ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

7 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago