2025-26ನೇ ಸಾಲಿನ 14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು, ಉತ್ಪಾದನಾ ವೆಚ್ಚಕ್ಕಿಂತ ಶೇಕಡ 50ರಷ್ಟು ಹೆಚ್ಚಳ ಮಾಡಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ…..ಮುಂದೆ ಓದಿ….
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ, ದೇಶದ ರೈತರ ಕಲ್ಯಾಣಕ್ಕಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2 ಲಕ್ಷ ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡುತ್ತಿದೆ ಎಂದು ತಿಳಿಸಿದರು. ಬಡ್ಡಿದರ ಸಹಾಯಧನ ಯೋಜನೆ ಅಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ನೆರವು ನೀಡಲಾಗುವುದು. ಶೇಕಡ 4ರ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಯೋಜನೆ ಮೂಲಕ ಅಗತ್ಯ ಕೃಷಿ ಕಾರ್ಯಗಳಿಗೆ ದುಡಿಯುವ ಬಂಡವಾಳವನ್ನು ಖಚಿತಪಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಡಿ 7 ಕೋಟಿ 71 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಬಡ್ವೇಲ್-ನೆಲ್ಲೂರು ನಡುವೆ 4 ಪಥಗಳ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಹೆದ್ದಾರಿ ನಿರ್ಮಾಣದಿಂದ ಪ್ರಮುಖ ಆರ್ಥಿಕ ಚಟುವಟಿಕೆ ಪ್ರದೇಶಗಳಾಗಿರುವ ಕರ್ನಾಟಕದ ಹುಬ್ಬಳ್ಳಿ, ಹೊಸಪೇಟೆ ಹಾಗೂ ಬಳ್ಳಾರಿಗಳಿಗೂ ಉತ್ತಮ ಸಂಪರ್ಕ ದೊರೆಯಲಿದೆ. ಇದರೊಂದಿಗೆ ರತ್ಲಾಮ್-ನಾಗ್ಡಾ ನಡುವಿನ ಮೂರು ಮತ್ತು ನಾಲ್ಕನೇ ರೈಲು ಮಾರ್ಗ ಹಾಗೂ ವಾರ್ಧಾ-ಬಲಾರ್ಶ್ ನಡುವಿನ ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…