Advertisement
MIRROR FOCUS

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

Share

2025-26ನೇ ಸಾಲಿನ 14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು, ಉತ್ಪಾದನಾ ವೆಚ್ಚಕ್ಕಿಂತ ಶೇಕಡ 50ರಷ್ಟು ಹೆಚ್ಚಳ ಮಾಡಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ…..ಮುಂದೆ ಓದಿ….

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ, ದೇಶದ ರೈತರ ಕಲ್ಯಾಣಕ್ಕಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2 ಲಕ್ಷ ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡುತ್ತಿದೆ ಎಂದು ತಿಳಿಸಿದರು. ಬಡ್ಡಿದರ ಸಹಾಯಧನ ಯೋಜನೆ ಅಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ನೆರವು ನೀಡಲಾಗುವುದು. ಶೇಕಡ 4ರ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಯೋಜನೆ ಮೂಲಕ ಅಗತ್ಯ ಕೃಷಿ ಕಾರ್ಯಗಳಿಗೆ ದುಡಿಯುವ ಬಂಡವಾಳವನ್ನು ಖಚಿತಪಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಡಿ 7 ಕೋಟಿ 71 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಡ್ವೇಲ್-ನೆಲ್ಲೂರು ನಡುವೆ 4 ಪಥಗಳ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಹೆದ್ದಾರಿ ನಿರ್ಮಾಣದಿಂದ ಪ್ರಮುಖ ಆರ್ಥಿಕ ಚಟುವಟಿಕೆ ಪ್ರದೇಶಗಳಾಗಿರುವ ಕರ್ನಾಟಕದ ಹುಬ್ಬಳ್ಳಿ, ಹೊಸಪೇಟೆ ಹಾಗೂ ಬಳ್ಳಾರಿಗಳಿಗೂ ಉತ್ತಮ ಸಂಪರ್ಕ ದೊರೆಯಲಿದೆ. ಇದರೊಂದಿಗೆ ರತ್ಲಾಮ್-ನಾಗ್ಡಾ ನಡುವಿನ ಮೂರು ಮತ್ತು ನಾಲ್ಕನೇ ರೈಲು ಮಾರ್ಗ ಹಾಗೂ ವಾರ್ಧಾ-ಬಲಾರ್ಶ್ ನಡುವಿನ ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

2 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago