ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿಗೊಳಿಸಬೇಕು ಎಂಬ ಆಗ್ರಹವನ್ನು ಮುಂದಿಟ್ಟು, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ 7ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದ್ದು, ಅದು ಕೇರಳ, ತಮಿಳುನಾಡು, ಪುದುಚೇರಿ ಮೂಲಕ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಿದರು. ಜಾಥಾ ಸಾಗುವ ಮಾರ್ಗದಾದ್ಯಂತ ರೈತರಿಂದ ಸಹಿ ಸಂಗ್ರಹಿಸಿ, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಲಾಗುವುದು ಎಂದರು.
ಮಾರ್ಚ್ 19ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದ್ದು, ಸಮಾವೇಶದ ನಂತರ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪ್ರಸ್ತುತ ಎಂಎಸ್ಪಿ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಕೃಷಿ ಉತ್ಪನ್ನಗಳು ಮಾರಾಟವಾಗುತ್ತಿರುವುದರಿಂದ, ರೈತರಿಗೆ ವರ್ಷಕ್ಕೆ ಸರಿಸುಮಾರು 15 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿದೆ. ಈ ಗಂಭೀರ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲು ಈ ಜಾಥಾ ಮತ್ತು ಸಮಾವೇಶ ಪ್ರಮುಖವಾಗಲಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…