ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿಗೊಳಿಸಬೇಕು ಎಂಬ ಆಗ್ರಹವನ್ನು ಮುಂದಿಟ್ಟು, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ 7ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದ್ದು, ಅದು ಕೇರಳ, ತಮಿಳುನಾಡು, ಪುದುಚೇರಿ ಮೂಲಕ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಿದರು. ಜಾಥಾ ಸಾಗುವ ಮಾರ್ಗದಾದ್ಯಂತ ರೈತರಿಂದ ಸಹಿ ಸಂಗ್ರಹಿಸಿ, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಲಾಗುವುದು ಎಂದರು.
ಮಾರ್ಚ್ 19ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದ್ದು, ಸಮಾವೇಶದ ನಂತರ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪ್ರಸ್ತುತ ಎಂಎಸ್ಪಿ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಕೃಷಿ ಉತ್ಪನ್ನಗಳು ಮಾರಾಟವಾಗುತ್ತಿರುವುದರಿಂದ, ರೈತರಿಗೆ ವರ್ಷಕ್ಕೆ ಸರಿಸುಮಾರು 15 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿದೆ. ಈ ಗಂಭೀರ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲು ಈ ಜಾಥಾ ಮತ್ತು ಸಮಾವೇಶ ಪ್ರಮುಖವಾಗಲಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…