ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.
ಯಾದಗಿರಿ, ಸುರಪುರ, ಹುಣಸಗಿ ಹಾಗೂ ನಾಯ್ಕಲ್ನಲ್ಲಿ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಇದೇ ತಿಂಗಳ 31 ರ ವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜನವರಿ 1 ರಿಂದ ಖರೀದಿ ಆರಂಭಗೊಳ್ಳಲಿದೆ. ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಾದ ಬೆಳೆಯ ಆಧಾರದಲ್ಲಿ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದು. ತಂತ್ರಾಂಶದಲ್ಲಿ ತಪ್ಪಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಸಾಮಾನ್ಯ ಪ್ರತಿ ಕ್ವಿಂಟಲ್ಗೆ 2300 ರೂಪಾಯಿ, ‘ಎ’ ಗ್ರೇಡ್ ಪ್ರತಿ ಕ್ವಿಂಟಲ್ಗೆ 2350 ರೂಪಾಯಿಯಂತೆ ಹಾಗೂ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್ಗೆ 3371 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್ಗೆ 3421 ರೂಪಾಯಿಯಂತೆ ಖರೀದಿಸಲಾಗುವುದು. ಎಕರೆಗೆ 25 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಮತ್ತು ಎಕರೆಗೆ 10 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿ ಜೋಳ ಖರೀದಿಸಲಾಗುತ್ತದೆ. ಭತ್ತವನ್ನು ತಮ್ಮ ಚೀಲಗಳೊಂದಿಗೆ ಖರೀದಿ ಕೇಂದ್ರಕ್ಕೆ ನೀಡುವ ರೈತರಿಗೆ ಪ್ರತಿ ಚೀಲಕ್ಕೆ 6 ರೂಪಾಯಿ ಖರೀದಿ ಏಜೆನ್ಸಿಗಳು ಪಾವತಿಸಲಿವೆ.
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…
ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…
ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…