ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.
ಯಾದಗಿರಿ, ಸುರಪುರ, ಹುಣಸಗಿ ಹಾಗೂ ನಾಯ್ಕಲ್ನಲ್ಲಿ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಇದೇ ತಿಂಗಳ 31 ರ ವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜನವರಿ 1 ರಿಂದ ಖರೀದಿ ಆರಂಭಗೊಳ್ಳಲಿದೆ. ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಾದ ಬೆಳೆಯ ಆಧಾರದಲ್ಲಿ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದು. ತಂತ್ರಾಂಶದಲ್ಲಿ ತಪ್ಪಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಸಾಮಾನ್ಯ ಪ್ರತಿ ಕ್ವಿಂಟಲ್ಗೆ 2300 ರೂಪಾಯಿ, ‘ಎ’ ಗ್ರೇಡ್ ಪ್ರತಿ ಕ್ವಿಂಟಲ್ಗೆ 2350 ರೂಪಾಯಿಯಂತೆ ಹಾಗೂ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್ಗೆ 3371 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್ಗೆ 3421 ರೂಪಾಯಿಯಂತೆ ಖರೀದಿಸಲಾಗುವುದು. ಎಕರೆಗೆ 25 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಮತ್ತು ಎಕರೆಗೆ 10 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿ ಜೋಳ ಖರೀದಿಸಲಾಗುತ್ತದೆ. ಭತ್ತವನ್ನು ತಮ್ಮ ಚೀಲಗಳೊಂದಿಗೆ ಖರೀದಿ ಕೇಂದ್ರಕ್ಕೆ ನೀಡುವ ರೈತರಿಗೆ ಪ್ರತಿ ಚೀಲಕ್ಕೆ 6 ರೂಪಾಯಿ ಖರೀದಿ ಏಜೆನ್ಸಿಗಳು ಪಾವತಿಸಲಿವೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…