ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.
ಯಾದಗಿರಿ, ಸುರಪುರ, ಹುಣಸಗಿ ಹಾಗೂ ನಾಯ್ಕಲ್ನಲ್ಲಿ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಇದೇ ತಿಂಗಳ 31 ರ ವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜನವರಿ 1 ರಿಂದ ಖರೀದಿ ಆರಂಭಗೊಳ್ಳಲಿದೆ. ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಾದ ಬೆಳೆಯ ಆಧಾರದಲ್ಲಿ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದು. ತಂತ್ರಾಂಶದಲ್ಲಿ ತಪ್ಪಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಸಾಮಾನ್ಯ ಪ್ರತಿ ಕ್ವಿಂಟಲ್ಗೆ 2300 ರೂಪಾಯಿ, ‘ಎ’ ಗ್ರೇಡ್ ಪ್ರತಿ ಕ್ವಿಂಟಲ್ಗೆ 2350 ರೂಪಾಯಿಯಂತೆ ಹಾಗೂ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್ಗೆ 3371 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್ಗೆ 3421 ರೂಪಾಯಿಯಂತೆ ಖರೀದಿಸಲಾಗುವುದು. ಎಕರೆಗೆ 25 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಮತ್ತು ಎಕರೆಗೆ 10 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿ ಜೋಳ ಖರೀದಿಸಲಾಗುತ್ತದೆ. ಭತ್ತವನ್ನು ತಮ್ಮ ಚೀಲಗಳೊಂದಿಗೆ ಖರೀದಿ ಕೇಂದ್ರಕ್ಕೆ ನೀಡುವ ರೈತರಿಗೆ ಪ್ರತಿ ಚೀಲಕ್ಕೆ 6 ರೂಪಾಯಿ ಖರೀದಿ ಏಜೆನ್ಸಿಗಳು ಪಾವತಿಸಲಿವೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…