ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.
ಯಾದಗಿರಿ, ಸುರಪುರ, ಹುಣಸಗಿ ಹಾಗೂ ನಾಯ್ಕಲ್ನಲ್ಲಿ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಇದೇ ತಿಂಗಳ 31 ರ ವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜನವರಿ 1 ರಿಂದ ಖರೀದಿ ಆರಂಭಗೊಳ್ಳಲಿದೆ. ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಾದ ಬೆಳೆಯ ಆಧಾರದಲ್ಲಿ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದು. ತಂತ್ರಾಂಶದಲ್ಲಿ ತಪ್ಪಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಸಾಮಾನ್ಯ ಪ್ರತಿ ಕ್ವಿಂಟಲ್ಗೆ 2300 ರೂಪಾಯಿ, ‘ಎ’ ಗ್ರೇಡ್ ಪ್ರತಿ ಕ್ವಿಂಟಲ್ಗೆ 2350 ರೂಪಾಯಿಯಂತೆ ಹಾಗೂ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್ಗೆ 3371 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್ಗೆ 3421 ರೂಪಾಯಿಯಂತೆ ಖರೀದಿಸಲಾಗುವುದು. ಎಕರೆಗೆ 25 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಮತ್ತು ಎಕರೆಗೆ 10 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿ ಜೋಳ ಖರೀದಿಸಲಾಗುತ್ತದೆ. ಭತ್ತವನ್ನು ತಮ್ಮ ಚೀಲಗಳೊಂದಿಗೆ ಖರೀದಿ ಕೇಂದ್ರಕ್ಕೆ ನೀಡುವ ರೈತರಿಗೆ ಪ್ರತಿ ಚೀಲಕ್ಕೆ 6 ರೂಪಾಯಿ ಖರೀದಿ ಏಜೆನ್ಸಿಗಳು ಪಾವತಿಸಲಿವೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…