ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

December 20, 2024
7:02 AM
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆ ರೈತರಿಗೆ ತೀರಾ ಅನುಕೂಲವಾಗಿದೆ.ಈ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….

ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ  ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ  ಎನ್ನುತ್ತಾರೆ ರೈತ ರಾಮಪ್ಪ.  ಈ ಬಾರಿ  ಸಕಾಲಕ್ಕೆ ಮಳೆಯಾಗದ ಕಾರಣ  ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.

 ಖರೀದಿ ಅಧಿಕಾರಿಗಳಿಗೆ ರೈತರು ತಮ್ಮ ಸ್ವವಿವರಗಳೊಂದಿಗೆ ಕೃಷಿ ಇಲಾಖೆ ನೀಡಿರುವ ಫ್ರುಟ್ ಐಡಿ ಸಂಖ್ಯೆ, ಪಹಣಿ, ಆಧಾರ್‍ ಪ್ರತಿ ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ, ರೈತರ ನೋಂದಣಿಗೆ ಡಿಸೆಂಬರ್ 1ರಿಂದ 30ರ ವರೆಗೆ  ಅವಕಾಶ ನೀಡಲಾಗಿದೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತ ರಾಗಿಯ  ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಿದ್ದಾರೆ
–  ಪ್ರಸಾದ್,ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror