ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

December 20, 2024
7:02 AM
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆ ರೈತರಿಗೆ ತೀರಾ ಅನುಕೂಲವಾಗಿದೆ.ಈ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….

ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ  ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ  ಎನ್ನುತ್ತಾರೆ ರೈತ ರಾಮಪ್ಪ.  ಈ ಬಾರಿ  ಸಕಾಲಕ್ಕೆ ಮಳೆಯಾಗದ ಕಾರಣ  ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.

Advertisement
 ಖರೀದಿ ಅಧಿಕಾರಿಗಳಿಗೆ ರೈತರು ತಮ್ಮ ಸ್ವವಿವರಗಳೊಂದಿಗೆ ಕೃಷಿ ಇಲಾಖೆ ನೀಡಿರುವ ಫ್ರುಟ್ ಐಡಿ ಸಂಖ್ಯೆ, ಪಹಣಿ, ಆಧಾರ್‍ ಪ್ರತಿ ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ, ರೈತರ ನೋಂದಣಿಗೆ ಡಿಸೆಂಬರ್ 1ರಿಂದ 30ರ ವರೆಗೆ  ಅವಕಾಶ ನೀಡಲಾಗಿದೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತ ರಾಗಿಯ  ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಿದ್ದಾರೆ
–  ಪ್ರಸಾದ್,ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror