ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….
ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ರೈತ ರಾಮಪ್ಪ. ಈ ಬಾರಿ ಸಕಾಲಕ್ಕೆ ಮಳೆಯಾಗದ ಕಾರಣ ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…