MIRROR FOCUS

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….

Advertisement

ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ  ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ  ಎನ್ನುತ್ತಾರೆ ರೈತ ರಾಮಪ್ಪ.  ಈ ಬಾರಿ  ಸಕಾಲಕ್ಕೆ ಮಳೆಯಾಗದ ಕಾರಣ  ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.

ಖರೀದಿ ಅಧಿಕಾರಿಗಳಿಗೆ ರೈತರು ತಮ್ಮ ಸ್ವವಿವರಗಳೊಂದಿಗೆ ಕೃಷಿ ಇಲಾಖೆ ನೀಡಿರುವ ಫ್ರುಟ್ ಐಡಿ ಸಂಖ್ಯೆ, ಪಹಣಿ, ಆಧಾರ್‍ ಪ್ರತಿ ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ, ರೈತರ ನೋಂದಣಿಗೆ ಡಿಸೆಂಬರ್ 1ರಿಂದ 30ರ ವರೆಗೆ  ಅವಕಾಶ ನೀಡಲಾಗಿದೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತ ರಾಗಿಯ  ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಿದ್ದಾರೆ
–  ಪ್ರಸಾದ್,ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

1 hour ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

6 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

9 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

16 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

16 hours ago