Advertisement
MIRROR FOCUS

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

Share

ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement

ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ  ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ  ಎನ್ನುತ್ತಾರೆ ರೈತ ರಾಮಪ್ಪ.  ಈ ಬಾರಿ  ಸಕಾಲಕ್ಕೆ ಮಳೆಯಾಗದ ಕಾರಣ  ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.

Advertisement
ಖರೀದಿ ಅಧಿಕಾರಿಗಳಿಗೆ ರೈತರು ತಮ್ಮ ಸ್ವವಿವರಗಳೊಂದಿಗೆ ಕೃಷಿ ಇಲಾಖೆ ನೀಡಿರುವ ಫ್ರುಟ್ ಐಡಿ ಸಂಖ್ಯೆ, ಪಹಣಿ, ಆಧಾರ್‍ ಪ್ರತಿ ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ, ರೈತರ ನೋಂದಣಿಗೆ ಡಿಸೆಂಬರ್ 1ರಿಂದ 30ರ ವರೆಗೆ  ಅವಕಾಶ ನೀಡಲಾಗಿದೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತ ರಾಗಿಯ  ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಿದ್ದಾರೆ
–  ಪ್ರಸಾದ್,ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago