ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….
ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ರೈತ ರಾಮಪ್ಪ. ಈ ಬಾರಿ ಸಕಾಲಕ್ಕೆ ಮಳೆಯಾಗದ ಕಾರಣ ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…