ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….
ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ರೈತ ರಾಮಪ್ಪ. ಈ ಬಾರಿ ಸಕಾಲಕ್ಕೆ ಮಳೆಯಾಗದ ಕಾರಣ ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…