Advertisement
MIRROR FOCUS

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

Share

ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….

ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ  ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ  ಎನ್ನುತ್ತಾರೆ ರೈತ ರಾಮಪ್ಪ.  ಈ ಬಾರಿ  ಸಕಾಲಕ್ಕೆ ಮಳೆಯಾಗದ ಕಾರಣ  ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.

ಖರೀದಿ ಅಧಿಕಾರಿಗಳಿಗೆ ರೈತರು ತಮ್ಮ ಸ್ವವಿವರಗಳೊಂದಿಗೆ ಕೃಷಿ ಇಲಾಖೆ ನೀಡಿರುವ ಫ್ರುಟ್ ಐಡಿ ಸಂಖ್ಯೆ, ಪಹಣಿ, ಆಧಾರ್‍ ಪ್ರತಿ ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ, ರೈತರ ನೋಂದಣಿಗೆ ಡಿಸೆಂಬರ್ 1ರಿಂದ 30ರ ವರೆಗೆ  ಅವಕಾಶ ನೀಡಲಾಗಿದೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತ ರಾಗಿಯ  ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಿದ್ದಾರೆ
–  ಪ್ರಸಾದ್,ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

7 minutes ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

20 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

20 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago