ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….
ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ರೈತ ರಾಮಪ್ಪ. ಈ ಬಾರಿ ಸಕಾಲಕ್ಕೆ ಮಳೆಯಾಗದ ಕಾರಣ ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…