Advertisement
MIRROR FOCUS

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

Share

ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….

ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ  ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ  ಎನ್ನುತ್ತಾರೆ ರೈತ ರಾಮಪ್ಪ.  ಈ ಬಾರಿ  ಸಕಾಲಕ್ಕೆ ಮಳೆಯಾಗದ ಕಾರಣ  ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.

ಖರೀದಿ ಅಧಿಕಾರಿಗಳಿಗೆ ರೈತರು ತಮ್ಮ ಸ್ವವಿವರಗಳೊಂದಿಗೆ ಕೃಷಿ ಇಲಾಖೆ ನೀಡಿರುವ ಫ್ರುಟ್ ಐಡಿ ಸಂಖ್ಯೆ, ಪಹಣಿ, ಆಧಾರ್‍ ಪ್ರತಿ ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ, ರೈತರ ನೋಂದಣಿಗೆ ಡಿಸೆಂಬರ್ 1ರಿಂದ 30ರ ವರೆಗೆ  ಅವಕಾಶ ನೀಡಲಾಗಿದೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತ ರಾಗಿಯ  ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಿದ್ದಾರೆ
–  ಪ್ರಸಾದ್,ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

2 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

3 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

11 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

16 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

16 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago