ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….
ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ರೈತ ರಾಮಪ್ಪ. ಈ ಬಾರಿ ಸಕಾಲಕ್ಕೆ ಮಳೆಯಾಗದ ಕಾರಣ ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…