ಸುದ್ದಿಗಳು

ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.

Advertisement
Advertisement
ಕೃಷ್ಣರಾಜ ಸಾಗರ ಅಣೆಕಟ್ಟು (KRS) ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಸುರಕ್ಷತೆ ವಿಚಾರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕನಿಷ್ಠ 4 ತಿಂಗಳು ಕಾಲಾವಕಾಶ ಬೇಕು ಎಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ. ನ್ಯಾಯಾಲಯದ ಆದೇಶದಂತೆ ಕೆಆರ್‌ಎಸ್ ಸುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಮತ್ತು ಸಿಮೀತ ಗಣಿ ಚಟುವಟಿಕೆಗಳಿಗೆ ಷರತ್ತುಗಳನ್ನು ವಿಧಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ ‘ಪ್ರಾಯೋಗಿಕ ಸ್ಫೋಟ’ (ಟ್ರಯಲ್ ಬ್ಲಾಸ್ಟ್​​) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು ‘ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್’ ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

2 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

4 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

8 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

8 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

16 hours ago