ಕೆಆರ್ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.
ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ ‘ಪ್ರಾಯೋಗಿಕ ಸ್ಫೋಟ’ (ಟ್ರಯಲ್ ಬ್ಲಾಸ್ಟ್) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು ‘ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್’ ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.
– ಅಂತರ್ಜಾಲ ಮಾಹಿತಿ
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…