Advertisement
ಸುದ್ದಿಗಳು

ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿ

Share

ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.

Advertisement
Advertisement
ಕೃಷ್ಣರಾಜ ಸಾಗರ ಅಣೆಕಟ್ಟು (KRS) ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಸುರಕ್ಷತೆ ವಿಚಾರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕನಿಷ್ಠ 4 ತಿಂಗಳು ಕಾಲಾವಕಾಶ ಬೇಕು ಎಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ. ನ್ಯಾಯಾಲಯದ ಆದೇಶದಂತೆ ಕೆಆರ್‌ಎಸ್ ಸುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಮತ್ತು ಸಿಮೀತ ಗಣಿ ಚಟುವಟಿಕೆಗಳಿಗೆ ಷರತ್ತುಗಳನ್ನು ವಿಧಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ ‘ಪ್ರಾಯೋಗಿಕ ಸ್ಫೋಟ’ (ಟ್ರಯಲ್ ಬ್ಲಾಸ್ಟ್​​) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು ‘ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್’ ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.

Advertisement

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

11 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

13 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

13 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

13 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

14 hours ago