ಕೆಆರ್ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.
ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ ‘ಪ್ರಾಯೋಗಿಕ ಸ್ಫೋಟ’ (ಟ್ರಯಲ್ ಬ್ಲಾಸ್ಟ್) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು ‘ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್’ ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.
– ಅಂತರ್ಜಾಲ ಮಾಹಿತಿ
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…
2026 ರ ಜನವರಿ–ಏಪ್ರಿಲ್ ಅವಧಿಯಲ್ಲಿ ಭಾರತವು ಶ್ರೀಲಂಕಾದ ಎರಡನೇ ಅತಿದೊಡ್ಡ ರಫ್ತು ಗಮ್ಯಸ್ಥಾನವಾಗಿ…