ಇಡೀ ಕ್ಷೇತ್ರದಲ್ಲಿ ಇದುವರೆಗೆ 124 ಸೇತುವೆ ಈಗಾಗಲೇ ನಿರ್ಮಾಣ ಮಾಡಲಾಗಿದೆ. ಮುಂದೆಯೂ ಅಭಿವೃದ್ಧಿ ಆಗುತ್ತದೆ. ಜನರು ಗೊಂದಲಕ್ಕೆ ಒಳಗಾಗುವುದು ಬೇಡ. ಮತ ಬಹಿಷ್ಕಾರ ಮಾಡುವುದರಿಂದ ಅಭಿವೃದ್ಧಿ ಆಗುವುದಿಲ್ಲ. ಉಪ್ಪುಕಳದಲ್ಲಿ ಕೂಡಾ ಸೇತುವೆ ನಿರ್ಮಾಣವಾಗುತ್ತದೆ. ಮಾಧ್ಯಮದವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ, ಆದ ಕೆಲಸ ಹೇಳುವುದಿಲ್ಲ ಹೀಗೆಂದು ಹೇಳಿದವರು ಸಚಿವ ಎಸ್ ಅಂಗಾರ.
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಈಚೆಗೆ ಕೊಚ್ಚಿ ಹೋದ ಕಾಲು ಸಂಕದ ಪ್ರದೇಶಕ್ಕೆ ಭೇಟಿ ನೀಡಿ ಜನರೊಂದಿಗೆ ಮಾತನಾಡಿದರು. ಜನರಿಗೆ ಸದಾ ಉತ್ತಮವಾದ ಸೇವೆ ನೀಡುವ ಕೆಲಸ ಈವರೆಗೂ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲೂ ಜನ ಸರಾಗವಾಗಿ ಹೋಗಿ ಬರುವಂತೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕಡೆಗೆ ಗಮನಹರಿಸುತ್ತಲೇ ಇದ್ದೇವೆ. ಏನೇ ಟೀಕೆಗಳು ಬಂದರೂ ಗೊಂದಕ ಬೇಡ. ಅಪಪ್ರಚಾರ ಮಾಡುವವರು, ಟೀಕೆ ಮಾಡುವವರು ಮಾಡಲಿ. ಕ್ಷೇತ್ರದ ಜನರಿಗೆ ಕೆಲಸ ಮಾಡುವುದೇ ನನ್ನ ಉದ್ದೇಶ ಎಂದು ಅಂಗಾರ ಹೇಳಿದರು.
ಮಾಧ್ಯಮದವರು ಹೇಳುತ್ತಾರೆ, ಆದರೆ ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ ಆದ ಕೆಲಸ ಹೇಳುವುದಿಲ್ಲ. ಅದೇ ವಾಟ್ಸಪ್ ಲಿ ಬರೆಯುವುದಿಲ್ಲ, ಹಾಕುವುದಿಲ್ಲ. ಬಾಳುಗೋಡಿನಲ್ಲಿ 3 ಸೇತುವೆ ಆಗಿದೆ, ಅದನ್ನು ಏಕೆ ಹೇಳುವುದಿಲ್ಲ? ಎಂದು ಪ್ರಶ್ನೆ ಮಾಡಿದ ಅಂಗಾರ ಅವರು ಅದನ್ನೂ ಹಾಕಿ. ಆಗ ನಮಗೂ ಖುಷಿಯಾಗುತ್ತದೆ,ಇನ್ನೂ ಕೆಲಸ ಮಾಡಬೇಕು ಎಂದು ಆಗುತ್ತದೆ. ರಾಜಕೀಯವಾಗಿ ಮಾತನಾಡಲು ಹೋದರೆ, ಅದೇ ರಾಜಕೀಯವೇ ಆಗುತ್ತದೆ ಎಂದರು.
ಮತದಾನ ಬಹಿಷ್ಕಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಈ ಹಿಂದೆ ಪೆರುವಾಜೆ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಿದ್ದರು. ಆದರೆ ಅಲ್ಲಿ ಒಬ್ಬ ಕಾರ್ಯಕರ್ತ ಮತ ಹಾಕಿದರು. ನಾರಾಯಣ ಎಂಬವರು ಮಾತ್ರಾ ಮತ ಹಾಕಿದರು. ಹೀಗಾಗಿ ಅಲ್ಲಿ ಅಭಿವೃದ್ಧಿ ಆಗಿದೆ. ಪೆರುವಾಜೆಯು ಮತ ಬಹಿಷ್ಕಾರದಿಂದ ಅಭಿವೃದ್ಧಿ ಆಗಿಲ್ಲ, ಆಗುವುದೂ ಇಲ್ಲ. ಅವರ ಒಬ್ಬರ ಮತದಿಂದ ಅಭಿವೃದ್ಧಿ ಆಗಿದೆ ಎಂದರು.
ಕ್ಷೇತ್ರದ 76 ಗ್ರಾಮಗಳಲ್ಲಿ ನದಿ ಇಲ್ಲದ ಗ್ರಾಮ ಇಲ್ಲ. ಜನಗಳಿಗೆ ಸರಾಗವಾಗಿ ಹೋಗಬೇಕಾದರೆ ಸೇತುವೆಯೇ ಪ್ರಮುಖ ಕೆಲಸ. ಅದರ ನಡುವೆ ಮುಳುಗು ಸೇತುವೆ ಇದೆ. ಎಲ್ಲಾ ಮುಳುಗು ಸೇತುವೆ ಪಕ್ಕಾ ಸೇತುವೆ ಆಗಿದೆ, ಆಗುತ್ತಲಿದೆ. ಜನ ಸರಾಗವಾಗಿ ಹೋಗಲು ವ್ಯವಸ್ಥೆ ಆಗುತ್ತದೆ.ಅಭಿವೃದ್ಧಿ ಮಾಡಲಾಗುತ್ತದೆ. ಇದುವರೆಗೆ 124 ಸೇತುವೆ ಆಗಿದೆ. ಹೊಸಮಠ, ಶಾಂತಿಮೊಗರು, ಕುಮಾರಧಾರಾದಂತಹ ದೊಡ್ಡ ಸೇತುವೆ ಆಗಿದೆ. ಎಡಮಂಗಲದ ಪಾಲೋಳಿಯಲ್ಲೂ ಸೇತುವೆಯಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ ಎಲ್ಲೆಲ್ಲಾ ಸೇತುವೆ ಮಾಡಿದೆ, ರಸ್ತೆ ಮಾಡಿದೆ ಎನ್ನುವುದನ್ನು ನೋಡಬೇಕು. ಈಗ ಮತ್ತೆ ಗೊಂದಲ ಮಾಡಿಸುತ್ತಿದೆ. ಜನ ಗೊಂದಲ ಮಾಡಬೇಡಿ, ಕೆಲಸ ನಿರಂತರ ಮಾಡುತ್ತೇವೆ ಎಂದು ಅಂಗಾರ ಹೇಳಿದರು. ಪ್ರಾಕೃತಿಕ ವಿಕೋಪ, ಕೋವಿಡ್ ಸಮಯದಲ್ಲೂ ಸರ್ಕಾರ ಜನ ಹಿತವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…