ಇಡೀ ಕ್ಷೇತ್ರದಲ್ಲಿ ಇದುವರೆಗೆ 124 ಸೇತುವೆ ಈಗಾಗಲೇ ನಿರ್ಮಾಣ ಮಾಡಲಾಗಿದೆ. ಮುಂದೆಯೂ ಅಭಿವೃದ್ಧಿ ಆಗುತ್ತದೆ. ಜನರು ಗೊಂದಲಕ್ಕೆ ಒಳಗಾಗುವುದು ಬೇಡ. ಮತ ಬಹಿಷ್ಕಾರ ಮಾಡುವುದರಿಂದ ಅಭಿವೃದ್ಧಿ ಆಗುವುದಿಲ್ಲ. ಉಪ್ಪುಕಳದಲ್ಲಿ ಕೂಡಾ ಸೇತುವೆ ನಿರ್ಮಾಣವಾಗುತ್ತದೆ. ಮಾಧ್ಯಮದವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ, ಆದ ಕೆಲಸ ಹೇಳುವುದಿಲ್ಲ ಹೀಗೆಂದು ಹೇಳಿದವರು ಸಚಿವ ಎಸ್ ಅಂಗಾರ.
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಈಚೆಗೆ ಕೊಚ್ಚಿ ಹೋದ ಕಾಲು ಸಂಕದ ಪ್ರದೇಶಕ್ಕೆ ಭೇಟಿ ನೀಡಿ ಜನರೊಂದಿಗೆ ಮಾತನಾಡಿದರು. ಜನರಿಗೆ ಸದಾ ಉತ್ತಮವಾದ ಸೇವೆ ನೀಡುವ ಕೆಲಸ ಈವರೆಗೂ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲೂ ಜನ ಸರಾಗವಾಗಿ ಹೋಗಿ ಬರುವಂತೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕಡೆಗೆ ಗಮನಹರಿಸುತ್ತಲೇ ಇದ್ದೇವೆ. ಏನೇ ಟೀಕೆಗಳು ಬಂದರೂ ಗೊಂದಕ ಬೇಡ. ಅಪಪ್ರಚಾರ ಮಾಡುವವರು, ಟೀಕೆ ಮಾಡುವವರು ಮಾಡಲಿ. ಕ್ಷೇತ್ರದ ಜನರಿಗೆ ಕೆಲಸ ಮಾಡುವುದೇ ನನ್ನ ಉದ್ದೇಶ ಎಂದು ಅಂಗಾರ ಹೇಳಿದರು.
ಮಾಧ್ಯಮದವರು ಹೇಳುತ್ತಾರೆ, ಆದರೆ ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ ಆದ ಕೆಲಸ ಹೇಳುವುದಿಲ್ಲ. ಅದೇ ವಾಟ್ಸಪ್ ಲಿ ಬರೆಯುವುದಿಲ್ಲ, ಹಾಕುವುದಿಲ್ಲ. ಬಾಳುಗೋಡಿನಲ್ಲಿ 3 ಸೇತುವೆ ಆಗಿದೆ, ಅದನ್ನು ಏಕೆ ಹೇಳುವುದಿಲ್ಲ? ಎಂದು ಪ್ರಶ್ನೆ ಮಾಡಿದ ಅಂಗಾರ ಅವರು ಅದನ್ನೂ ಹಾಕಿ. ಆಗ ನಮಗೂ ಖುಷಿಯಾಗುತ್ತದೆ,ಇನ್ನೂ ಕೆಲಸ ಮಾಡಬೇಕು ಎಂದು ಆಗುತ್ತದೆ. ರಾಜಕೀಯವಾಗಿ ಮಾತನಾಡಲು ಹೋದರೆ, ಅದೇ ರಾಜಕೀಯವೇ ಆಗುತ್ತದೆ ಎಂದರು.
ಮತದಾನ ಬಹಿಷ್ಕಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಈ ಹಿಂದೆ ಪೆರುವಾಜೆ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಿದ್ದರು. ಆದರೆ ಅಲ್ಲಿ ಒಬ್ಬ ಕಾರ್ಯಕರ್ತ ಮತ ಹಾಕಿದರು. ನಾರಾಯಣ ಎಂಬವರು ಮಾತ್ರಾ ಮತ ಹಾಕಿದರು. ಹೀಗಾಗಿ ಅಲ್ಲಿ ಅಭಿವೃದ್ಧಿ ಆಗಿದೆ. ಪೆರುವಾಜೆಯು ಮತ ಬಹಿಷ್ಕಾರದಿಂದ ಅಭಿವೃದ್ಧಿ ಆಗಿಲ್ಲ, ಆಗುವುದೂ ಇಲ್ಲ. ಅವರ ಒಬ್ಬರ ಮತದಿಂದ ಅಭಿವೃದ್ಧಿ ಆಗಿದೆ ಎಂದರು.
ಕ್ಷೇತ್ರದ 76 ಗ್ರಾಮಗಳಲ್ಲಿ ನದಿ ಇಲ್ಲದ ಗ್ರಾಮ ಇಲ್ಲ. ಜನಗಳಿಗೆ ಸರಾಗವಾಗಿ ಹೋಗಬೇಕಾದರೆ ಸೇತುವೆಯೇ ಪ್ರಮುಖ ಕೆಲಸ. ಅದರ ನಡುವೆ ಮುಳುಗು ಸೇತುವೆ ಇದೆ. ಎಲ್ಲಾ ಮುಳುಗು ಸೇತುವೆ ಪಕ್ಕಾ ಸೇತುವೆ ಆಗಿದೆ, ಆಗುತ್ತಲಿದೆ. ಜನ ಸರಾಗವಾಗಿ ಹೋಗಲು ವ್ಯವಸ್ಥೆ ಆಗುತ್ತದೆ.ಅಭಿವೃದ್ಧಿ ಮಾಡಲಾಗುತ್ತದೆ. ಇದುವರೆಗೆ 124 ಸೇತುವೆ ಆಗಿದೆ. ಹೊಸಮಠ, ಶಾಂತಿಮೊಗರು, ಕುಮಾರಧಾರಾದಂತಹ ದೊಡ್ಡ ಸೇತುವೆ ಆಗಿದೆ. ಎಡಮಂಗಲದ ಪಾಲೋಳಿಯಲ್ಲೂ ಸೇತುವೆಯಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ ಎಲ್ಲೆಲ್ಲಾ ಸೇತುವೆ ಮಾಡಿದೆ, ರಸ್ತೆ ಮಾಡಿದೆ ಎನ್ನುವುದನ್ನು ನೋಡಬೇಕು. ಈಗ ಮತ್ತೆ ಗೊಂದಲ ಮಾಡಿಸುತ್ತಿದೆ. ಜನ ಗೊಂದಲ ಮಾಡಬೇಡಿ, ಕೆಲಸ ನಿರಂತರ ಮಾಡುತ್ತೇವೆ ಎಂದು ಅಂಗಾರ ಹೇಳಿದರು. ಪ್ರಾಕೃತಿಕ ವಿಕೋಪ, ಕೋವಿಡ್ ಸಮಯದಲ್ಲೂ ಸರ್ಕಾರ ಜನ ಹಿತವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…