ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ.ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ,ಯಾವುದೇ ಅನಗತ್ಯ ತಂಟೆ,ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…