ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ.ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ,ಯಾವುದೇ ಅನಗತ್ಯ ತಂಟೆ,ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…