ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ.ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ,ಯಾವುದೇ ಅನಗತ್ಯ ತಂಟೆ,ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…