ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ.ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ,ಯಾವುದೇ ಅನಗತ್ಯ ತಂಟೆ,ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…