ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

June 2, 2025
7:33 AM

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ತೊಂದರೆಯಾದರೆ ಮುಂಬರುವ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60 ರಷ್ಟು ಅರಣ್ಯ ಪ್ರದೇಶವಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror