Advertisement
MIRROR FOCUS

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

Share

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ತೊಂದರೆಯಾದರೆ ಮುಂಬರುವ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60 ರಷ್ಟು ಅರಣ್ಯ ಪ್ರದೇಶವಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago