ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ತೊಂದರೆಯಾದರೆ ಮುಂಬರುವ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60 ರಷ್ಟು ಅರಣ್ಯ ಪ್ರದೇಶವಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.