ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ತೊಂದರೆಯಾದರೆ ಮುಂಬರುವ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60 ರಷ್ಟು ಅರಣ್ಯ ಪ್ರದೇಶವಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…