Advertisement
MIRROR FOCUS

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

Share

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ತೊಂದರೆಯಾದರೆ ಮುಂಬರುವ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60 ರಷ್ಟು ಅರಣ್ಯ ಪ್ರದೇಶವಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

3 minutes ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

9 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

10 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

16 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

17 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

19 hours ago