ಸುದ್ದಿಗಳು

ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ  ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್  ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ  ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.

Advertisement

ಜೈನ ಸಮುದಾಯದ 110 ಜನರು ಪ್ರಯಾಣ

ರೈಲಿನಲ್ಲಿದ್ದ ಚಿಕ್ಕಮಗಳೂರು ಮೂಲದ ಪ್ರಕಾಶ್ ಜೈನ್ ಸಹೋದರ ಮಾಳ ಹರ್ಷವರ್ಧನ್ ಜೈನ್  ಮಾತನಾಡಿದ್ದಾರೆ. ಮೇ 31 ರಂದು ಶೃಂಗೇರಿ, ಹೊರನಾಡಿನಿಂದ ಜೈನ ಸಮಾಜದ 110 ಮಂದಿ ಶಿಕರ್ಜಿ ಕ್ಷೇತ್ರಕ್ಕೆ ಹೊರಟಿದ್ದರು. ಅಜಿತ್‌ಕುಮಾರ್ ಜೈನ್ ನೇತೃತ್ವದಲ್ಲಿ ಶ್ರಾವಕ ಶ್ರಾವಕಿಯರು ಯಾತ್ರೆಗೆ ತೆರಳಿದ್ದರು. ಬೆಳಗ್ಗೆ 4 ಗಂಟೆಗೆ ಬೆಂಗಳೂರು ತಲುಪಿದರು. ನನ್ನ ಅಣ್ಣ ಮಾಳ ಪ್ರಕಾಶ್ ಜೈನ್, ಅತ್ತಿಗೆ ಲಾವಣ್ಯ 110 ಯಾತ್ರಿಕರೊಂದಿಗೆ ತೆರಳಿದ್ದರು ಎಂದು ಹೇಳಿದರು. ಅಂದು ರೈಲು ಎರಡು ಗಂಟೆ ತಡವಾಗಿ ಹೊರಟಿತು. ಎಸ್-5, ಎಸ್-6 ಮತ್ತು ಎಸ್-7 ಕೊನೆಯ ಮೂರು ಬೋಗಿಗಳಲ್ಲಿ 110 ಜನ ಪ್ರಯಾಣಿಸುತ್ತಿದ್ದರು. ಇಂಜಿನ್ ಚೇಂಜ್ ಆದಾಗ ಕೊನೆಯಲ್ಲಿ ಮೂರು ಬೋಗಿಗಳು ಮೊದಲ ಮೂರು ಬೋಗಿಗಳಾದವು ಎಂದರು.

ಘಟನೆಯ ಮಾಹಿತಿ ನೀಡಿದ ಪ್ರಯಾಣಿಕರ ಕುಟುಂಬಸ್ಥರು

Advertisement

ಜೋರಾಗಿ ಶಬ್ದವಾಯಿತು, ಆನಂತರ ರೈಲಿನಲ್ಲಿ ಮೇಲೆ ಮಲಗಿದ್ದವರು ಕೆಳಗೆ ಬಿದ್ದರು ಎಂದು ನನ್ನ ಅತ್ತಿಗೆ ತಿಳಿಸಿದ್ದಾರೆ. ಹೊರಗೆ ಬಂದು ನೋಡಿದಾಗ ಅಪಾರ ಸಾವು ನೋವು ಉಂಟಾಗಿತ್ತು. 110 ಮಂದಿಯೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಒಂದು ಸಣ್ಣ ಪುಟ್ಟ ಗಾಯಗಳಾಗಿಲ್ಲ ನನ್ನ ಸೋದರ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…

4 hours ago

ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

11 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

12 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

12 hours ago