Advertisement
ಸುದ್ದಿಗಳು

ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

Share

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ  ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್  ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ  ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.

ಜೈನ ಸಮುದಾಯದ 110 ಜನರು ಪ್ರಯಾಣ

ರೈಲಿನಲ್ಲಿದ್ದ ಚಿಕ್ಕಮಗಳೂರು ಮೂಲದ ಪ್ರಕಾಶ್ ಜೈನ್ ಸಹೋದರ ಮಾಳ ಹರ್ಷವರ್ಧನ್ ಜೈನ್  ಮಾತನಾಡಿದ್ದಾರೆ. ಮೇ 31 ರಂದು ಶೃಂಗೇರಿ, ಹೊರನಾಡಿನಿಂದ ಜೈನ ಸಮಾಜದ 110 ಮಂದಿ ಶಿಕರ್ಜಿ ಕ್ಷೇತ್ರಕ್ಕೆ ಹೊರಟಿದ್ದರು. ಅಜಿತ್‌ಕುಮಾರ್ ಜೈನ್ ನೇತೃತ್ವದಲ್ಲಿ ಶ್ರಾವಕ ಶ್ರಾವಕಿಯರು ಯಾತ್ರೆಗೆ ತೆರಳಿದ್ದರು. ಬೆಳಗ್ಗೆ 4 ಗಂಟೆಗೆ ಬೆಂಗಳೂರು ತಲುಪಿದರು. ನನ್ನ ಅಣ್ಣ ಮಾಳ ಪ್ರಕಾಶ್ ಜೈನ್, ಅತ್ತಿಗೆ ಲಾವಣ್ಯ 110 ಯಾತ್ರಿಕರೊಂದಿಗೆ ತೆರಳಿದ್ದರು ಎಂದು ಹೇಳಿದರು. ಅಂದು ರೈಲು ಎರಡು ಗಂಟೆ ತಡವಾಗಿ ಹೊರಟಿತು. ಎಸ್-5, ಎಸ್-6 ಮತ್ತು ಎಸ್-7 ಕೊನೆಯ ಮೂರು ಬೋಗಿಗಳಲ್ಲಿ 110 ಜನ ಪ್ರಯಾಣಿಸುತ್ತಿದ್ದರು. ಇಂಜಿನ್ ಚೇಂಜ್ ಆದಾಗ ಕೊನೆಯಲ್ಲಿ ಮೂರು ಬೋಗಿಗಳು ಮೊದಲ ಮೂರು ಬೋಗಿಗಳಾದವು ಎಂದರು.

ಘಟನೆಯ ಮಾಹಿತಿ ನೀಡಿದ ಪ್ರಯಾಣಿಕರ ಕುಟುಂಬಸ್ಥರು

ಜೋರಾಗಿ ಶಬ್ದವಾಯಿತು, ಆನಂತರ ರೈಲಿನಲ್ಲಿ ಮೇಲೆ ಮಲಗಿದ್ದವರು ಕೆಳಗೆ ಬಿದ್ದರು ಎಂದು ನನ್ನ ಅತ್ತಿಗೆ ತಿಳಿಸಿದ್ದಾರೆ. ಹೊರಗೆ ಬಂದು ನೋಡಿದಾಗ ಅಪಾರ ಸಾವು ನೋವು ಉಂಟಾಗಿತ್ತು. 110 ಮಂದಿಯೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಒಂದು ಸಣ್ಣ ಪುಟ್ಟ ಗಾಯಗಳಾಗಿಲ್ಲ ನನ್ನ ಸೋದರ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

4 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

4 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

22 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago