ಕಾಲುವೆಯ ದುರಸ್ತಿ ಕೆಲಸ | ಕಾಮಗಾರಿ ಸ್ಥಳದಲ್ಲಿಯೇ ಮಲಗಿದ ಸಚಿವ ರಾಮುಲು |

November 2, 2022
2:33 PM

ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದರು. 

Advertisement
Advertisement
Advertisement
Advertisement

ಭದ್ರಾ ನದಿ ಮತ್ತು ವಾಣಿವಿಲಾಸ ಸಾಗರ ಪಾತ್ರದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ವೇದಾವತಿ ನದಿಗೆ ಹರಿಸಲಾಗಿದೆ. ಕರ್ನಾಟಕ ಮತ್ತು ಆಂಧ್ರ ಗಡಿಭಾಗಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆಯಲ್ಲಿ ಒಟ್ಟು 58 ಪಿಲ್ಲರ್​ಗಳಿದ್ದು, 10ನೇ ಪಿಲ್ಲರ್ ದುರಸ್ತಿಗೊಂಡಿದೆ. 15 ನೇ ಪಿಲ್ಲರ್ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಎಲ್‍ಎಲ್‍ಸಿ ಕಾಲುವೆ ದುರಸ್ತಿಗೆ ಒಳಗಾಗಿದ್ದು, ರೈತರ ಬೆಳೆಗಳಿಗೆ ನೀರು ಒದಗಿಸಲು ಈಗ ತಾತ್ಕಾಲಿಕವಾದ ಪಿಲ್ಲರ್ ನಿರ್ಮಾಣ ಮಾಡಲಾಗುತ್ತಿದೆ.

Advertisement

ಕಾಲುವೆಯ ಮೂಲಕ ತಮ್ಮ ಜಮೀನುಗಳಿಗೆ ನೀರು ಪಡೆಯುವ ರೈತರು, ಲಕ್ಷಾಂತರ ಎಕರೆ ಬೆಳೆ ಹಾನಿಗೀಡಾಗುವ ಭೀತಿಯಲ್ಲಿದ್ದಾರೆ.ಕಾಲುವೆಯ ಸೇತುವೆಯ ಸ್ಥಂಬ ಕುಸಿದಿದ್ದರಿಂದ ಕೆಳಭಾಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೈತರು ಬೆಳೆದ ಭತ್ತ ಮತ್ತಿತರ ಬೆಳೆ ಒಣಗುತ್ತಿದೆ. ಹೀಗಾಗಿ, ಈ ಕಾಲುವೆ ರಿಪೇರಿ ತುರ್ತಾಗಿ ನಡೆಯಬೇಕು, ಕಾಮಗಾರಿ ಪೂರ್ಣಗೊಂಡ ನಂತರವೇ ಸ್ಥಳದಿಂದ ನಾನು ತೆರಳುವುದು, ಅಲ್ಲಿವರೆಗೆ ಇಲ್ಲಿಯೇ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಸ್ಥಳದಲ್ಲೇ ರಾತ್ರಿ ವಾಸ್ತವ್ಯ ಹೂಡಿದರು.

ಸೇತುವೆ ಪಿಲ್ಲರ್ ಮರು ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಕಾಲುವೆಗೆ ನೀರು ಹರಿಯುವುದನ್ನು ಅಧಿಕಾರಿಗಳು ಬಂದ್ ಮಾಡಿದ್ದರು. ಅಲ್ಲದೇ ಪಿಲ್ಲರ್ ನಿರ್ಮಣ ಕಾಮಗಾರಿ ವಿಳಂಬ ಹಿನ್ನಲೆ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು ನಿನ್ನೆ ಮಧ್ಯಾಹ್ನ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ಕಾಮಗಾರಿ ಪೂರ್ಣ ಮುಗಿಯುವವರೆಗೂ ಕಾಮಗಾರಿ ಸ್ಥಳದಲ್ಲೇ ಇರಲು ನಿರ್ಧಾರ ಮಾಡಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror