ಕಾಲುವೆಯ ದುರಸ್ತಿ ಕೆಲಸ | ಕಾಮಗಾರಿ ಸ್ಥಳದಲ್ಲಿಯೇ ಮಲಗಿದ ಸಚಿವ ರಾಮುಲು |

November 2, 2022
2:33 PM

ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದರು. 

ಭದ್ರಾ ನದಿ ಮತ್ತು ವಾಣಿವಿಲಾಸ ಸಾಗರ ಪಾತ್ರದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ವೇದಾವತಿ ನದಿಗೆ ಹರಿಸಲಾಗಿದೆ. ಕರ್ನಾಟಕ ಮತ್ತು ಆಂಧ್ರ ಗಡಿಭಾಗಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆಯಲ್ಲಿ ಒಟ್ಟು 58 ಪಿಲ್ಲರ್​ಗಳಿದ್ದು, 10ನೇ ಪಿಲ್ಲರ್ ದುರಸ್ತಿಗೊಂಡಿದೆ. 15 ನೇ ಪಿಲ್ಲರ್ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಎಲ್‍ಎಲ್‍ಸಿ ಕಾಲುವೆ ದುರಸ್ತಿಗೆ ಒಳಗಾಗಿದ್ದು, ರೈತರ ಬೆಳೆಗಳಿಗೆ ನೀರು ಒದಗಿಸಲು ಈಗ ತಾತ್ಕಾಲಿಕವಾದ ಪಿಲ್ಲರ್ ನಿರ್ಮಾಣ ಮಾಡಲಾಗುತ್ತಿದೆ.

ಕಾಲುವೆಯ ಮೂಲಕ ತಮ್ಮ ಜಮೀನುಗಳಿಗೆ ನೀರು ಪಡೆಯುವ ರೈತರು, ಲಕ್ಷಾಂತರ ಎಕರೆ ಬೆಳೆ ಹಾನಿಗೀಡಾಗುವ ಭೀತಿಯಲ್ಲಿದ್ದಾರೆ.ಕಾಲುವೆಯ ಸೇತುವೆಯ ಸ್ಥಂಬ ಕುಸಿದಿದ್ದರಿಂದ ಕೆಳಭಾಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೈತರು ಬೆಳೆದ ಭತ್ತ ಮತ್ತಿತರ ಬೆಳೆ ಒಣಗುತ್ತಿದೆ. ಹೀಗಾಗಿ, ಈ ಕಾಲುವೆ ರಿಪೇರಿ ತುರ್ತಾಗಿ ನಡೆಯಬೇಕು, ಕಾಮಗಾರಿ ಪೂರ್ಣಗೊಂಡ ನಂತರವೇ ಸ್ಥಳದಿಂದ ನಾನು ತೆರಳುವುದು, ಅಲ್ಲಿವರೆಗೆ ಇಲ್ಲಿಯೇ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಸ್ಥಳದಲ್ಲೇ ರಾತ್ರಿ ವಾಸ್ತವ್ಯ ಹೂಡಿದರು.

ಸೇತುವೆ ಪಿಲ್ಲರ್ ಮರು ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಕಾಲುವೆಗೆ ನೀರು ಹರಿಯುವುದನ್ನು ಅಧಿಕಾರಿಗಳು ಬಂದ್ ಮಾಡಿದ್ದರು. ಅಲ್ಲದೇ ಪಿಲ್ಲರ್ ನಿರ್ಮಣ ಕಾಮಗಾರಿ ವಿಳಂಬ ಹಿನ್ನಲೆ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು ನಿನ್ನೆ ಮಧ್ಯಾಹ್ನ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ಕಾಮಗಾರಿ ಪೂರ್ಣ ಮುಗಿಯುವವರೆಗೂ ಕಾಮಗಾರಿ ಸ್ಥಳದಲ್ಲೇ ಇರಲು ನಿರ್ಧಾರ ಮಾಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror