Advertisement
ಸುದ್ದಿಗಳು

ಕಾಲುವೆಯ ದುರಸ್ತಿ ಕೆಲಸ | ಕಾಮಗಾರಿ ಸ್ಥಳದಲ್ಲಿಯೇ ಮಲಗಿದ ಸಚಿವ ರಾಮುಲು |

Share

ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದರು. 

ಭದ್ರಾ ನದಿ ಮತ್ತು ವಾಣಿವಿಲಾಸ ಸಾಗರ ಪಾತ್ರದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ವೇದಾವತಿ ನದಿಗೆ ಹರಿಸಲಾಗಿದೆ. ಕರ್ನಾಟಕ ಮತ್ತು ಆಂಧ್ರ ಗಡಿಭಾಗಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆಯಲ್ಲಿ ಒಟ್ಟು 58 ಪಿಲ್ಲರ್​ಗಳಿದ್ದು, 10ನೇ ಪಿಲ್ಲರ್ ದುರಸ್ತಿಗೊಂಡಿದೆ. 15 ನೇ ಪಿಲ್ಲರ್ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಎಲ್‍ಎಲ್‍ಸಿ ಕಾಲುವೆ ದುರಸ್ತಿಗೆ ಒಳಗಾಗಿದ್ದು, ರೈತರ ಬೆಳೆಗಳಿಗೆ ನೀರು ಒದಗಿಸಲು ಈಗ ತಾತ್ಕಾಲಿಕವಾದ ಪಿಲ್ಲರ್ ನಿರ್ಮಾಣ ಮಾಡಲಾಗುತ್ತಿದೆ.

ಕಾಲುವೆಯ ಮೂಲಕ ತಮ್ಮ ಜಮೀನುಗಳಿಗೆ ನೀರು ಪಡೆಯುವ ರೈತರು, ಲಕ್ಷಾಂತರ ಎಕರೆ ಬೆಳೆ ಹಾನಿಗೀಡಾಗುವ ಭೀತಿಯಲ್ಲಿದ್ದಾರೆ.ಕಾಲುವೆಯ ಸೇತುವೆಯ ಸ್ಥಂಬ ಕುಸಿದಿದ್ದರಿಂದ ಕೆಳಭಾಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೈತರು ಬೆಳೆದ ಭತ್ತ ಮತ್ತಿತರ ಬೆಳೆ ಒಣಗುತ್ತಿದೆ. ಹೀಗಾಗಿ, ಈ ಕಾಲುವೆ ರಿಪೇರಿ ತುರ್ತಾಗಿ ನಡೆಯಬೇಕು, ಕಾಮಗಾರಿ ಪೂರ್ಣಗೊಂಡ ನಂತರವೇ ಸ್ಥಳದಿಂದ ನಾನು ತೆರಳುವುದು, ಅಲ್ಲಿವರೆಗೆ ಇಲ್ಲಿಯೇ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಸ್ಥಳದಲ್ಲೇ ರಾತ್ರಿ ವಾಸ್ತವ್ಯ ಹೂಡಿದರು.

ಸೇತುವೆ ಪಿಲ್ಲರ್ ಮರು ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಕಾಲುವೆಗೆ ನೀರು ಹರಿಯುವುದನ್ನು ಅಧಿಕಾರಿಗಳು ಬಂದ್ ಮಾಡಿದ್ದರು. ಅಲ್ಲದೇ ಪಿಲ್ಲರ್ ನಿರ್ಮಣ ಕಾಮಗಾರಿ ವಿಳಂಬ ಹಿನ್ನಲೆ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು ನಿನ್ನೆ ಮಧ್ಯಾಹ್ನ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ಕಾಮಗಾರಿ ಪೂರ್ಣ ಮುಗಿಯುವವರೆಗೂ ಕಾಮಗಾರಿ ಸ್ಥಳದಲ್ಲೇ ಇರಲು ನಿರ್ಧಾರ ಮಾಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

22 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

22 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

22 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

23 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago