Advertisement
ಸುದ್ದಿಗಳು

ಕಾಲುವೆಯ ದುರಸ್ತಿ ಕೆಲಸ | ಕಾಮಗಾರಿ ಸ್ಥಳದಲ್ಲಿಯೇ ಮಲಗಿದ ಸಚಿವ ರಾಮುಲು |

Share

ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದರು. 

ಭದ್ರಾ ನದಿ ಮತ್ತು ವಾಣಿವಿಲಾಸ ಸಾಗರ ಪಾತ್ರದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ವೇದಾವತಿ ನದಿಗೆ ಹರಿಸಲಾಗಿದೆ. ಕರ್ನಾಟಕ ಮತ್ತು ಆಂಧ್ರ ಗಡಿಭಾಗಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆಯಲ್ಲಿ ಒಟ್ಟು 58 ಪಿಲ್ಲರ್​ಗಳಿದ್ದು, 10ನೇ ಪಿಲ್ಲರ್ ದುರಸ್ತಿಗೊಂಡಿದೆ. 15 ನೇ ಪಿಲ್ಲರ್ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಎಲ್‍ಎಲ್‍ಸಿ ಕಾಲುವೆ ದುರಸ್ತಿಗೆ ಒಳಗಾಗಿದ್ದು, ರೈತರ ಬೆಳೆಗಳಿಗೆ ನೀರು ಒದಗಿಸಲು ಈಗ ತಾತ್ಕಾಲಿಕವಾದ ಪಿಲ್ಲರ್ ನಿರ್ಮಾಣ ಮಾಡಲಾಗುತ್ತಿದೆ.

ಕಾಲುವೆಯ ಮೂಲಕ ತಮ್ಮ ಜಮೀನುಗಳಿಗೆ ನೀರು ಪಡೆಯುವ ರೈತರು, ಲಕ್ಷಾಂತರ ಎಕರೆ ಬೆಳೆ ಹಾನಿಗೀಡಾಗುವ ಭೀತಿಯಲ್ಲಿದ್ದಾರೆ.ಕಾಲುವೆಯ ಸೇತುವೆಯ ಸ್ಥಂಬ ಕುಸಿದಿದ್ದರಿಂದ ಕೆಳಭಾಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೈತರು ಬೆಳೆದ ಭತ್ತ ಮತ್ತಿತರ ಬೆಳೆ ಒಣಗುತ್ತಿದೆ. ಹೀಗಾಗಿ, ಈ ಕಾಲುವೆ ರಿಪೇರಿ ತುರ್ತಾಗಿ ನಡೆಯಬೇಕು, ಕಾಮಗಾರಿ ಪೂರ್ಣಗೊಂಡ ನಂತರವೇ ಸ್ಥಳದಿಂದ ನಾನು ತೆರಳುವುದು, ಅಲ್ಲಿವರೆಗೆ ಇಲ್ಲಿಯೇ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಸ್ಥಳದಲ್ಲೇ ರಾತ್ರಿ ವಾಸ್ತವ್ಯ ಹೂಡಿದರು.

ಸೇತುವೆ ಪಿಲ್ಲರ್ ಮರು ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಕಾಲುವೆಗೆ ನೀರು ಹರಿಯುವುದನ್ನು ಅಧಿಕಾರಿಗಳು ಬಂದ್ ಮಾಡಿದ್ದರು. ಅಲ್ಲದೇ ಪಿಲ್ಲರ್ ನಿರ್ಮಣ ಕಾಮಗಾರಿ ವಿಳಂಬ ಹಿನ್ನಲೆ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು ನಿನ್ನೆ ಮಧ್ಯಾಹ್ನ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ಕಾಮಗಾರಿ ಪೂರ್ಣ ಮುಗಿಯುವವರೆಗೂ ಕಾಮಗಾರಿ ಸ್ಥಳದಲ್ಲೇ ಇರಲು ನಿರ್ಧಾರ ಮಾಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 minute ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

9 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

11 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

19 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago