Advertisement
ಸುದ್ದಿಗಳು

ಕಾಲುವೆಯ ದುರಸ್ತಿ ಕೆಲಸ | ಕಾಮಗಾರಿ ಸ್ಥಳದಲ್ಲಿಯೇ ಮಲಗಿದ ಸಚಿವ ರಾಮುಲು |

Share

ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದರು. 

Advertisement

ಭದ್ರಾ ನದಿ ಮತ್ತು ವಾಣಿವಿಲಾಸ ಸಾಗರ ಪಾತ್ರದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ವೇದಾವತಿ ನದಿಗೆ ಹರಿಸಲಾಗಿದೆ. ಕರ್ನಾಟಕ ಮತ್ತು ಆಂಧ್ರ ಗಡಿಭಾಗಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆಯಲ್ಲಿ ಒಟ್ಟು 58 ಪಿಲ್ಲರ್​ಗಳಿದ್ದು, 10ನೇ ಪಿಲ್ಲರ್ ದುರಸ್ತಿಗೊಂಡಿದೆ. 15 ನೇ ಪಿಲ್ಲರ್ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಎಲ್‍ಎಲ್‍ಸಿ ಕಾಲುವೆ ದುರಸ್ತಿಗೆ ಒಳಗಾಗಿದ್ದು, ರೈತರ ಬೆಳೆಗಳಿಗೆ ನೀರು ಒದಗಿಸಲು ಈಗ ತಾತ್ಕಾಲಿಕವಾದ ಪಿಲ್ಲರ್ ನಿರ್ಮಾಣ ಮಾಡಲಾಗುತ್ತಿದೆ.

ಕಾಲುವೆಯ ಮೂಲಕ ತಮ್ಮ ಜಮೀನುಗಳಿಗೆ ನೀರು ಪಡೆಯುವ ರೈತರು, ಲಕ್ಷಾಂತರ ಎಕರೆ ಬೆಳೆ ಹಾನಿಗೀಡಾಗುವ ಭೀತಿಯಲ್ಲಿದ್ದಾರೆ.ಕಾಲುವೆಯ ಸೇತುವೆಯ ಸ್ಥಂಬ ಕುಸಿದಿದ್ದರಿಂದ ಕೆಳಭಾಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೈತರು ಬೆಳೆದ ಭತ್ತ ಮತ್ತಿತರ ಬೆಳೆ ಒಣಗುತ್ತಿದೆ. ಹೀಗಾಗಿ, ಈ ಕಾಲುವೆ ರಿಪೇರಿ ತುರ್ತಾಗಿ ನಡೆಯಬೇಕು, ಕಾಮಗಾರಿ ಪೂರ್ಣಗೊಂಡ ನಂತರವೇ ಸ್ಥಳದಿಂದ ನಾನು ತೆರಳುವುದು, ಅಲ್ಲಿವರೆಗೆ ಇಲ್ಲಿಯೇ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಸ್ಥಳದಲ್ಲೇ ರಾತ್ರಿ ವಾಸ್ತವ್ಯ ಹೂಡಿದರು.

ಸೇತುವೆ ಪಿಲ್ಲರ್ ಮರು ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಕಾಲುವೆಗೆ ನೀರು ಹರಿಯುವುದನ್ನು ಅಧಿಕಾರಿಗಳು ಬಂದ್ ಮಾಡಿದ್ದರು. ಅಲ್ಲದೇ ಪಿಲ್ಲರ್ ನಿರ್ಮಣ ಕಾಮಗಾರಿ ವಿಳಂಬ ಹಿನ್ನಲೆ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು ನಿನ್ನೆ ಮಧ್ಯಾಹ್ನ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ಕಾಮಗಾರಿ ಪೂರ್ಣ ಮುಗಿಯುವವರೆಗೂ ಕಾಮಗಾರಿ ಸ್ಥಳದಲ್ಲೇ ಇರಲು ನಿರ್ಧಾರ ಮಾಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

10 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago