ದೀಪಾವಳಿಗೆ ಲೋಡ್ ಶೆಡ್ಡಿಂಗ್ ಇಲ್ಲ | ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ | ಸಚಿವ ಸುನಿಲ್‌ ಕುಮಾರ್

October 23, 2022
12:03 PM

‌ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್‌ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್‌ ಶೆಡ್ಡಿಂಗ್‌ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

Advertisement
Advertisement

ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್‌ ಕುಮಾರ್ ತಿಳಿಸಿದ್ದಾರೆ.‌  ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group