ದೀಪಾವಳಿಗೆ ಲೋಡ್ ಶೆಡ್ಡಿಂಗ್ ಇಲ್ಲ | ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ | ಸಚಿವ ಸುನಿಲ್‌ ಕುಮಾರ್

October 23, 2022
12:03 PM

‌ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್‌ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್‌ ಶೆಡ್ಡಿಂಗ್‌ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್‌ ಕುಮಾರ್ ತಿಳಿಸಿದ್ದಾರೆ.‌  ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror